ADVERTISEMENT

ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ: ಸಿದ್ದರಾಮಯ್ಯ ಸಂತಸ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 21:36 IST
Last Updated 17 ಆಗಸ್ಟ್ 2022, 21:36 IST
ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ
ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರನ್ನಾಗಿ ನೇಮಕ ಮಾಡಿರುವ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ‘ಬಿಜೆಪಿಯು ಯಡಿಯೂರಪ್ಪ ಅವರನ್ನು ಗುರುತಿಸಿರುವುದು ಸಂತೋಷ’ ಎಂದಿದ್ದಾರೆ.

ಆದರೆ, ಕೆಪಿಸಿಸಿ ಯಡಿಯೂರಪ್ಪ ಅವರ ನೇಮಕದ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದೆ.

‘ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ಕಳಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಬಿಎಸ್‌ವೈ ಮುಕ್ತ ಬಿಜೆಪಿ ಮಾಡುವಲ್ಲಿ ಯಶಸ್ವಿ ಹೆಜ್ಜೆಯನ್ನಿಟ್ಟಿದೆ ‘ಸಂತೋಷ’ ಕೂಟ. ಯಡಿಯೂರಪ್ಪ ಅವರೀಗ ಅಧಿಕೃತವಾಗಿ ಮಾರ್ಗದರ್ಶನ ಮಂಡಳಿ ಸೇರಿದಂತಾಯಿತು. ಬಿಎಸ್‌ವೈ ಅವರನ್ನು ಮುಗಿಸಿಹಾಕುವ ಡಿಮೋಷನ್ ಕೊಟ್ಟು ಪ್ರಮೋಷನ್‌ ಎಂಬಂತೆ ಬಿಂಬಿಸುತ್ತಿದೆ’ ಎಂದು ಕೆಪಿಸಿಸಿ ಟ್ವೀಟ್‌ ಮೂಲಕ ಲೇವಡಿಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.