ADVERTISEMENT

ಮಂಗಳೂರು ಭೇಟಿಗೆ ಸಿದ್ದರಾಮಯ್ಯಗೆ ನಿರ್ಬಂಧ ಹೇರಿಲ್ಲ: ಬಿ.ಎಸ್.ಯಡಿಯೂರಪ್ಪ

ಮಂಗಳೂರಿಗೆ ತೆರಳಿದ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 5:13 IST
Last Updated 21 ಡಿಸೆಂಬರ್ 2019, 5:13 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು:ಮಂಗಳೂರಿಗೆ ತೆರಳುವುದಕ್ಕೆವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ನಿರ್ಬಂಧ ಹೇರಿಲ್ಲ.ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಎಂತಹ ಪರಿಸ್ಥಿತಿ ಇತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದುಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಹೇಳಿದರು.

ಗೃಹ ಸಚಿವಬಸವರಾಜ ಬೊಮ್ಮಾಯಿ ಜತೆಗೆ ಮಂಗಳೂರಿಗೆ ತೆರಳುವುದಕ್ಕೂ ಮುನ್ನ ಮಾತನಾಡಿದ ಅವರು, ‘ಮಂಗಳೂರಿಗೆ ತೆರಳಿ, ಅಲ್ಲಿನ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲಿದ್ದೇವೆ. ಬಳಿಕ ಉಡುಪಿಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ಮತ್ತೆ ಮಂಗಳೂರಿಗೆ ಬರಲಿದ್ಗಿದೇವೆ’ ಎಂದು ತಿಳಿಸಿದರು.

ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ವಿಷಯಗಳನ್ನು ಮಂಗಳೂರಿನಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.