ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಂಬೇಡ್ಕರ್ ಪ್ರತಿಮೆಗೆ ಬುಧವಾರ ಬೆಳಿಗ್ಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಸಚಿವ ಬಿ. ಶ್ರೀ ರಾಮುಲು, ಮಾಜಿ ಸಚಿವ ಎಚ್. ಆಂಜನೇಯ, ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತಾ,ಆಡಳಿತಾಧಿಕಾರಿ ರಾಕೇಶ್ ಸಿಂಗ್, ಹಿರಿಯ ಅಧಿಕಾರಿಗಳು ಇದ್ದರು.
ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರಗಳನ್ನು ಹಾಗೂ ಸುರಕ್ಷತಾ ದಿರಿಸುಗಳನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿ ವಿತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.