
ಬಿ.ಎಸ್. ಯಡಿಯೂರಪ್ಪ
ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್ಟಿಎಸ್ ವಿಶೇಷ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದೆ.
ಪ್ರಕರಣದ ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್ ನ್ಯಾಯಾಲಯವು ಡಿಸೆಂಬರ್ 2ರಂದು ಕೋರ್ಟ್ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.
ಈ ಸಂಬಂಧ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ಪ್ರಸ್ತುತ ಪಡಿಸಿದ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರಿನ ಎಫ್ಟಿಎಸ್ ವಿಶೇಷ ಕೋರ್ಟ್–Iರ ನ್ಯಾಯಾಧೀಶೆ ಸುಜಾತಾ ಅವರು 30 ದಿನಗಳ ಒಳಗಾಗಿ ಸಾಕ್ಷಿ ವಿಚಾರಣೆ ಆಗಬೇಕು ಎಂಬ ಕಾರಣಕ್ಕೆ ಸಮನ್ಸ್ ಜಾರಿಗೆ ಆದೇಶಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.