ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 53.36 ಲಕ್ಷ ರೈತರ ಖಾತೆಗಳಿಗೆ ಒಟ್ಟು
₹ 985.61 ಕೋಟಿ ಬಿಡುಗಡೆ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ಯೋಜನೆಯಡಿಯ 8 ನೇ ಕಂತಿನ ಹಣವನ್ನು ಶುಕ್ರವಾರ ಬಿಡುಗಡೆ ಮಾಡಿದರು. ಈ ಯೋಜನೆಯಡಿ ಕೇಂದ್ರ ಸರ್ಕಾರ ವರ್ಷಕ್ಕೆ ₹6 ಸಾವಿರ ಮೊತ್ತವನ್ನು ರೈತರ ಖಾತೆಗಳಿಗೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಜಮೆ ಮಾಡುತ್ತದೆ.
2019 ರಿಂದ 2021ರ ಮಾರ್ಚ್ವರೆಗೆ ರಾಜ್ಯದ 55.06 ಲಕ್ಷ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ಒಟ್ಟು ₹6936. 98 ಕೋಟಿ ಜಮೆ ಮಾಡಿದೆ.
ಕೇಂದ್ರ ಸರ್ಕಾರ ‘ಕಿಸಾನ್ ಸಮ್ಮಾನ್’ ಯೋಜನೆಯಡಿ ಒಬ್ಬ ರೈತರಿಗೆ ₹6 ಸಾವಿರ ನೀಡುವ ಜತೆಗೆ ರಾಜ್ಯ ಸರ್ಕಾರವೂ ವರ್ಷಕ್ಕೆ ಪ್ರತಿ ರೈತನಿಗೆ ತಲಾ ₹ 4 ಸಾವಿರ ನೀಡುತ್ತಿದೆ. ಹೀಗಾಗಿ, ಕರ್ನಾಟಕದ ರೈತರಿಗೆ ₹10 ಸಾವಿರ ಸಿಗುತ್ತಿದೆ.
ಇಲ್ಲಿಯವರೆಗೆ ₹2,891.70 ಕೋಟಿಯನ್ನು ರೈತರ ಖಾತೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.