ADVERTISEMENT

ಬದುಕಿಯೂ ಸತ್ತಂತಿರುವ ಕಾಂಗ್ರೆಸ್ ಸರ್ಕಾರ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2023, 5:33 IST
Last Updated 17 ಸೆಪ್ಟೆಂಬರ್ 2023, 5:33 IST
<div class="paragraphs"><p>ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿಯ ನಾಯಕರು&nbsp;ಚಿತ್ರದಲ್ಲಿದ್ದಾರೆ</p></div>

ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿಯ ನಾಯಕರು ಚಿತ್ರದಲ್ಲಿದ್ದಾರೆ

   

ಕೋಲಾರ: 'ರಾಜ್ಯದಲ್ಲಿ ಭೀಕರ ಬರಗಾಲ ಸೇರಿದಂತೆ ಹಲವಾರು ಸಮಸ್ಯೆ ತಲೆದೋರಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಹಿತ ಮರೆತು ಕುಂಭಕರ್ಣ ನಿದ್ದೆಯಲ್ಲಿದೆ. ಬದುಕಿಯೂ ಸತ್ತಂತಿದೆ' ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟೀಕಾ ಪ್ರಹಾರ ನಡೆಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯ ಸರ್ಕಾರವನ್ನು ಎಚ್ಚರಿಸಲು, ಹೋರಾಟ ರೂಪಿಸಲು ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸಿ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಂಡಿದ್ದೇವೆ. ಗಣೇಶ ಚತುರ್ಥಿ ಬಳಿಕ ಎಲ್ಲಾ ಮುಖಂಡರು ಎಲ್ಲಾ ಜಿಲ್ಲೆಗಳಿಗೆ ತೆರಳಲಿದ್ದಾರೆ' ಎಂದರು.

ADVERTISEMENT

'ಲೋಕಸಭೆ ಚುನಾವಣೆಗೂ ಸಿದ್ಧತೆ ನಡೆಸುತ್ತಿದ್ದೇವೆ. ಈ ಬಾರಿ 25ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.