ADVERTISEMENT

ದಾವೋಸ್‌ನಲ್ಲಿ 40 ಕಂಪನಿಗಳ ಜತೆ ಸಭೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 20:03 IST
Last Updated 16 ಜನವರಿ 2020, 20:03 IST

ಬೆಂಗಳೂರು: ದಾವೋಸ್‌ನಲ್ಲಿ ಇದೇ 20 ರಿಂದ 24ರವರೆಗೆ ನಡೆಯುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜಾಗತಿಕ ಮಟ್ಟದ 40 ಕಂಪನಿಗಳ ಜತೆ ಹೂಡಿಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಿದ್ದಾರೆ.

ನ.3ರಿಂದ 5ರವರೆಗೆ ಬೆಂಗಳೂರಿನಲ್ಲಿ ನಡೆಯುವ ಇನ್‌ವೆಸ್ಟ್‌ ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಜಾಗತಿಕ ಕಂಪನಿಗಳ ಮುಖ್ಯಸ್ಥರಿಗೆ ಯಡಿಯೂರಪ್ಪ ಆಹ್ವಾನ ನೀಡಲಿದ್ದಾರೆ.

ದಾವೋಸ್‌ನಲ್ಲಿ ಕರ್ನಾಟಕ ಪೆವಿಲಿಯನ್‌ಗೆ ಜ.20ರಂದು ಚಾಲನೆ ನೀಡಲಾಗುವುದು. 40 ಕಂಪನಿಗಳಲ್ಲದೆ, ಇನ್ನು ಹಲವು ಕಂಪನಿಗಳ ಮುಖ್ಯಸ್ಥರ ಜತೆ ಚರ್ಚೆ ನಡೆಸುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.