ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಶುಕ್ರವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ರಾಜ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದ್ದು, ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಯಡಿಯೂರಪ್ಪ ಅವರು ಪ್ರಧಾನಿ ಭೇಟಿಯ ನಂತರ ಸುದ್ದಿಗಾರರಿಗೆ ತಿಳಿಸಿದರು.
‘ಶನಿವಾರ ಮತ್ತಷ್ಟು ಮುಖಂಡರೊಂದಿಗೆ ಚರ್ಚಿಸುವೆ’ ಎಂದ ಅವರು, ‘ನಾಯಕತ್ವ ಬದಲಾವಣೆ ಸಾಧ್ಯತೆ ಇದೆಯೇ?’ ಎಂದು ಕೇಳಲಾದ ಪ್ರಶ್ನೆಗೆ ನಗುತ್ತಲೇ ಉತ್ತರಿಸಿ, ‘ನನಗೇನೂ ಗೊತ್ತಿಲ್ಲ. ನೀವೇ ಹೇಳಿ’ ಎಂದು ಹೇಳಿದರು.
ಕೇಂದ್ರ ಸಂಪುಟಕ್ಕೆ ರಾಜ್ಯದಿಂದ ಸೇರಿರುವ ನೂತನ ಸಚಿವರಿಗೆ ರಾತ್ರಿ ಭೋಜನ ಕೂಟ ಏರ್ಪಡಿಸಿದ್ದಾಗಿ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.