ADVERTISEMENT

ಚನ್ನಪಟ್ಟಣದ ಬೊಂಬೆಗಳಿಗೆ ಬಿಎಸ್‌ಐ ಮುದ್ರೆ: ಆದೇಶ ಹಿಂಪಡೆಯಲು ಎಚ್‌ಡಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 20:59 IST
Last Updated 19 ಅಕ್ಟೋಬರ್ 2020, 20:59 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಚನ್ನಪಟ್ಟಣದ ಬೊಂಬೆಗಳಿಗೂ ಭಾರತೀಯ ಮಾನಕ ಬ್ಯೂರೊ (ಬಿಎಸ್‌ಐ) ಮುದ್ರೆ ಕಡ್ಡಾಯಗೊಳಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಬಿಎಸ್‌ಐ ಪ್ರಮಾಣಪತ್ರ ಪಡೆಯಲು ಸಾವಿರಾರು ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಕೇಂದ್ರದ ಈ ನಿರ್ಧಾರ ಗುಡಿ ಕೈಗಾರಿಕೆ ಗಳಿಗೆ ಮಾರಕವಾಗಲಿದೆ. ಕೇಂದ್ರ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ವಾಪಸ್‌ ಪಡೆಯುವ ಮೂಲಕ ಗುಡಿ ಕೈಗಾರಿಕೆಗಳ ರಕ್ಷಣೆಗೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.

‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಬೊಂಬೆ ತಯಾರಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಈಗ ಅವರ ಮೇಲೆ ಕೆಂಗಣ್ಣು ಬೀರಿದ್ದಾರೆ. ದೊಡ್ಡ ಉದ್ದಿಮೆದಾರರ ಹಿತ ಕಾಯುವ ಇಂತಹ ನಿರ್ಧಾರದಿಂದ ಆಟಿಕೆ ತಯಾರಿಕೆಯನ್ನೇ ನಂಬಿ ಬದುಕುವ ಲಕ್ಷಾಂತರ ಮಂದಿಯ ಉದ್ಯೋಗಕ್ಕೆ ಸಂಚಕಾರ ಬರಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.