ADVERTISEMENT

ಪ್ರಾಣಿ–ಪಕ್ಷಿಗಳಿಗೂ ಆಹಾರ ನೀಡಿ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 19:30 IST
Last Updated 10 ಏಪ್ರಿಲ್ 2020, 19:30 IST
ಬೆಕ್ಕಿಗೆ ಮರಿಗೆ ಹಾಲು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
ಬೆಕ್ಕಿಗೆ ಮರಿಗೆ ಹಾಲು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ಬೆಳಿಗ್ಗೆ ತಮ್ಮ ನಿವಾಸದ ಬಳಿದ ಹಸಿದಿದ್ದ ಬೆಕ್ಕಿಗೆ ಬಟ್ಟಲಿನಲ್ಲಿ ಹಾಲು ನೀಡಿ, ಅದರ ಹಸಿವು ಇಂಗಿಸಿದರು.

ಲಾಕ್‌ಲೌಡ್‌ನ ಈ ಸಂಕಷ್ಟದ ಸಂದರ್ಭದಲ್ಲಿ ಹಾದಿ– ಬೀದಿಯಲ್ಲಿ, ಮನೆಗಳ ಸುತ್ತಮುತ್ತ ಆಹಾರವಿಲ್ಲದೆ ಕಂಗೆಟ್ಟಿರುವ ಪ್ರಾಣಿ– ಪಕ್ಷಿಗಳಿಗೆ ಆಹಾರ ನೀಡಿ ಹಸಿವು ಇಂಗಿಸುವಂತೆ ಅವರು ಟ್ವೀಟ್‌ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

‘ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು ಹಾಗೂ ಪಕ್ಷಿಗಳು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ.ನಗರಗಳಲ್ಲಿ ಇದರ ಪರಿಣಾಮ ಇನ್ನೂ ಗಂಭೀರವಾಗಿದೆ. ಹಾಗಾಗಿ, ನಾಯಿಗಳಿಗೆ ಮತ್ತು ಪಕ್ಷಿಗಳಿಗೆ ನೀರು, ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ.#feedthehungers’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.