ಬೆಂಗಳೂರು:ಮೂರುಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಪೂರ್ಣಾವಧಿ ಪೂರೈಸದೆ ರಾಜೀನಾಮೆ ಸಲ್ಲಿಸಿ ಅಧಿಕಾರದಿಂದ ಕೆಳಗಿಳಿದಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡ್ಯೂರಪ್ಪ(BS Yeddyurappa)ಇದೀಗ ತಮ್ಮ ಹೆಸರನ್ನು ಯಡಿಯೂರಪ್ಪ(BS Yediyurappa)ಎಂದು ಬದಲಿಸಿಕೊಂಡಿದ್ದಾರೆ.
‘ಕರ್ನಾಟಕದಲ್ಲಿ ಪರ್ಯಾಯ ಸರ್ಕಾರ ರಚನೆಯಾಗಲಿದೆ. ನಾನು ಮುಖ್ಯಮಂತ್ರಿಯಾಗಿ ಇಂದು ಸಂಜೆ 6–6.15ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ನಿಮ್ಮನ್ನು ಆಮಂತ್ರಿಸುತ್ತಿದ್ದೇನೆ’ ಎಂದು ಪ್ರಕಟಣೆ ಹೊರಡಿಸಿದ್ದಾರೆ.
ಜ್ಯೋತಿಷಿಗಳ ಸಲಹೆ ಮೇರೆಗೆಯಡಿಯೂರಪ್ಪ ಅವರು 2007ರಲ್ಲಿಯೂ ಹೆಸರು ಬದಲಿಸಿಕೊಂಡಿದ್ದರು. ಆಗ ಬಿ.ಎಸ್. ಯಡ್ಯೂರಪ್ಪ ಎಂದು ಹೆಸರು ಬದಲಿಸಿಕೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.