ADVERTISEMENT

ಎಚ್‌ಡಿಕೆ ಯೋಗ್ಯತೆ ಜಗತ್ತಿಗೇ ಗೊತ್ತು: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 20:06 IST
Last Updated 29 ನವೆಂಬರ್ 2019, 20:06 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ‘ಸಚಿವ ವಿ.ಸೋಮಣ್ಣ ಅವರನ್ನು ಬಚ್ಚಾ ಎಂದಿರುವ ಎಚ್.ಡಿ.ಕುಮಾರಸ್ವಾಮಿ ಅವರ ಯೋಗ್ಯತೆ ಏನೆಂಬುದು ಇಡೀ ಜಗತ್ತಿಗೆ ಗೊತ್ತಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್‌ ಕಾಲೊನಿಯ ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಸೋಮಣ್ಣ ಒಬ್ಬ ಭಾವನಾತ್ಮಕ ಜೀವಿ, ಹೀನಾಯ ಟೀಕೆಯಿಂದ ನೊಂದಿದ್ದಾರೆ. ಹೀಗಾಗಿ ದೇಹ ತ್ಯಾಗದ ಮಾತನ್ನಾಡಿದ್ದಾರೆ’ ಎಂದರು.

‘ಸೋಮಣ್ಣ ಉತ್ತಮ ರಾಜಕಾರಣಿ. ಅವರ ಬಗ್ಗೆ ಕುಮಾರಸ್ವಾಮಿ ಸಲ್ಲದ ಹೇಳಿಕೆಗಳನ್ನು ನೀಡಿದ್ದು ಸರಿಯಲ್ಲ. ಕುಮಾರಸ್ವಾಮಿ ಯೋಗ್ಯತೆ ಜಗತ್ತಿಗೆ ಗೊತ್ತಿರುವುದರಿಂದ ಅವರ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.