ADVERTISEMENT

ರಾಜ್ಯದ ಹಲವೆಡೆ ಪ್ರವಾಹ: ₹ 50 ಕೋಟಿ ತುರ್ತು ಪರಿಹಾರ ಬಿಡುಗಡೆಗೆ ಬಿಎಸ್‌ವೈ ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಆಗಸ್ಟ್ 2020, 9:45 IST
Last Updated 6 ಆಗಸ್ಟ್ 2020, 9:45 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಿರ್ದೇಶನ ನೀಡಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾ ವಸ್ತುವಾರಿ ಸಚಿವರಿಗೆ ನಿರ್ದೇಶನ ನೀಡಿದ್ದೇನೆ. ಪರಿಹಾರ ವಿತರಣೆ ಬಗ್ಗೆ ಖಚಿತಪಡಿಸಿಕೊಳ್ಳಲು ಜಿಲ್ಲೆಯಲ್ಲಿಯೇ ಉಳಿದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ' ಎಂದು ಯಡಿಯೂರಪ್ಪ ಹೇಳಿದ್ದಾರೆ.

ನೆರೆ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ₹ 50 ಕೋಟಿ ಬಿಡುಗಡೆ ಮಾಡಲು ಆದೇಶಿಸಿದ್ದೇನೆ. ಪ್ರವಾಹ ಪರಿಸ್ಥಿತಿ ತಲೆದೋರಿರುವ ಪ್ರದೇಶಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಚಿವರಿಗೆ ಹೇಳಿದ್ದೇನೆ. ಅಗತ್ಯಬಿದ್ದರೆ ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಹಣ ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದು ಬಿಎಸ್‌ವೈ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.