ADVERTISEMENT

ಸಿದ್ದರಾಮಯ್ಯ ಅವರ ಬಗ್ಗೆ ಕಾಂಗ್ರೆಸ್ಸಿನವರಿಗೇ ಸಮಾಧಾನ ಇಲ್ಲ- ಬಿಎಸ್ ವೈ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 13:25 IST
Last Updated 28 ಅಕ್ಟೋಬರ್ 2019, 13:25 IST
   

ಬೆಂಗಳೂರು: ಇತ್ತೀಚೆಗೆಮನಬಂದಂತೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ, ಅವರು ಏನು ಮಾತನಾಡಿದ್ದಾರೆ ಎಂಬುದು ಅವರಿಗೇ ಗೊತ್ತಾಗಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ವೀಡಿಯೋದಲ್ಲಿ ಮಾತನಾಡಿರುವ ಕುರಿತು ಮಾಧ್ಯಮದೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರುಅವರ ಪಕ್ಷದಲ್ಲೇ ಗೊಂದಲ ಹುಟ್ಟಿಸ್ತಿದ್ದಾರೆ.ತಾವೇ ಎಲ್ಲ ಜವಾಬ್ದಾರಿ ಹೊತ್ತಿದ್ದೇನೆ ಅಂತ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಬಗ್ಗೆ ಕಾಂಗ್ರೆಸ್ ನವರಿಗೇ ಸಮಾಧಾನ ಇಲ್ಲ.ಜನ‌ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸ್ತಿದ್ದಾರೆ. ಸಿದ್ದರಾಮಯ್ಯ ಡಿಕ್ಟೇಟರ್ ರೀತಿ ಮಾತನಾಡುತ್ತಿದ್ದಾರೆ.ಸಿದ್ದರಾಮಯ್ಯ ಅವರ ಇಂಥ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

ADVERTISEMENT

ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ

ಬಿಜೆಪಿ ಸರ್ಕಾರ ಉರುಳಲು ಬಿಡಲ್ಲ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂಬ ನಂಬಿಕೆಯಿಂದ ಕುಮಾರಸ್ವಾಮಿ ಈ ರೀತಿ ಹೇಳಿದ್ದಾರೆ ಎಂದರು.

ಅತಿವೃಷ್ಟಿ ಹಾಗೂ ಬೇರೆ ಬೇರೆ ಜನರ ಸಮಸ್ಯೆಗಳನ್ನು ಸರ್ಕಾರ ಉತ್ತಮವಾಗಿ ನಿಭಾಯಿಸುತ್ತಿದೆ. ಇದನ್ನು ನೋಡಿಯೇ ಕುಮಾರಸ್ವಾಮಿ ಈ ಸರ್ಕಾರವನ್ನು ಡಿಸ್ಟರ್ಬ್ ಮಾಡಬಾರದು ಎಂದು ಕುಮಾರಸ್ವಾಮಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.