ADVERTISEMENT

ರೈತರ ಸಾಲ ಮನ್ನಾ ಬಿಎಸ್‌ವೈ ತೀರ್ಮಾನ: ನಳಿನ್ ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 15:41 IST
Last Updated 26 ಫೆಬ್ರುವರಿ 2020, 15:41 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಳಗಾವಿ: ‘ರೈತರ ಸಾಲ ಮನ್ನಾ ಮಾಡಲು ಮತ್ತು ವಿಶೇಷವಾದ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

ಇಲ್ಲಿ ಬುಧವಾರ ನಡೆದ ಪಕ್ಷದ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ‘2ನೇ ಬಾರಿ ಮುಖ್ಯಮಂತ್ರಿಯಾದಾಗ ನೇಕಾರರ ಸಾಲ ಮನ್ನಾ ಮಾಡಿ ಅವರ ಕಣ್ಣೀರು ಒರೆಸಿದ್ದರು. ಯಡಿಯೂರಪ್ಪ, ಜನರ ಕಣ್ಣೀರು ಒರೆಸುವ ಮುಖ್ಯಮಂತ್ರಿ’ ಎಂದರು.

‘ಬಿಜೆಪಿ ಸರ್ಕಾರ ಈಗ ಬೀಳುತ್ತದೆ, ಆಗ ಬೀಳುತ್ತದೆ ಎಂದು ವಿರೋಧಪಕ್ಷದವರು ಕಾಯುತ್ತಿದ್ದಾರೆ. ಆದರೆ, ಹಾಗೇನೂ ಆಗುವುದಿಲ್ಲ. ಯಡಿಯೂರಪ್ಪ ಅಧಿಕಾರದ ಅವಧಿ ಪೂರೈಸಲಿದ್ದಾರೆ. ಮುಂದಿನ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.