ADVERTISEMENT

‘ಬುದ್ಧ– ಬಸವ ಅಂಬೇಡ್ಕರ್ ವಿವಿ ಸ್ಥಾಪನೆಗೆ ಕ್ರಮ’

ಸಚಿವ ಸತೀಶ ಜಾರಕಿಹೊಳಿ ಭರವಸೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2019, 20:00 IST
Last Updated 10 ಫೆಬ್ರುವರಿ 2019, 20:00 IST

ಚನ್ನಮ್ಮನ ಕಿತ್ತೂರು: ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರನ್ನು ಒಟ್ಟಿಗೆ ಅಧ್ಯಯನ ಮಾಡಲು ಸಹಾಯಕವಾಗುವಂತೆ, ಜಾಗತಿಕ ಮಟ್ಟದ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಅಂಬಡಗಟ್ಟಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಶ್ರೀಗಳು, ‘ಖಾನಾಪುರ ಭಾಗದಲ್ಲಿ 100 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು’ ಎಂದು ಪ್ರಸ್ತಾಪ ಮಾಡಿದರು. ಅದಕ್ಕೆ ಸಹಮತ ವ್ಯಕ್ತಪಡಿಸಿದ ಸಚಿವರು, ವಿಶ್ವವಿದ್ಯಾಲಯ ಸ್ಥಾಪನೆಯ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT