ADVERTISEMENT

ಕಟ್ಟಡ ಕುಸಿತ ಪ್ರಕರಣ: ಐದು ಸಾವು, 55 ಜನರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 8:07 IST
Last Updated 20 ಮಾರ್ಚ್ 2019, 8:07 IST
   

ಧಾರವಾಡ: ನಗರದಲ್ಲಿ ಬಹುಮಹಡಿಕಟ್ಟಡ ಕುಸಿತದಿಂದಾಗಿ ಐದು ಜನರು ಮೃತಪಟ್ಟಿದ್ದು, ಇಲ್ಲಿಯವರೆಗೆ 55 ಜನರನ್ನು ರಕ್ಷಣೆ ಮಾಡಲಾಗಿದೆ ಎಂದುಅಗ್ನಿಶಾಮಕ ಇಲಾಖೆ ಡಿಜಿಪಿ ಎಂ.ಎನ್‌. ರೆಡ್ಡಿತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದ ಅವರು, ನಮ್ಮ ಅಂದಾಜಿನ ಪ್ರಕಾರ ಕಟ್ಟಡದ ತಳಭಾಗದಲ್ಲಿ ಇನ್ನೂ 15-20 ಜನ ಸಿಲುಕಿಕೊಂಡಿದ್ದಾರೆ. ರಾಜ್ಯದಿಂದ ಎಸ್‌ಡಿಆರ್‌ಎಫ್‌ ಹಾಗೂ ಕೇಂದ್ರದಿಂದ ಎನ್‌ಡಿಆರ್‌ಎಫ್‌ ತಂಡವನ್ನು ಕರೆಸಲಾಗಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಗೂ ಒಂದು ಪದ್ಧತಿ ಇದೆ ಆ ಪದ್ಧತಿ ಪ್ರಕಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.

ಕಟ್ಟಡದ ಅವಶೇಷಗಳ ನಾಲ್ಕು ಕಡೆಗಳಲ್ಲಿ ಜನ ಇದ್ದಾರೆ ಎಂಬ ಕುರುಹು ಸಿಕ್ಕಿದೆ. ಅವರನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಕರ್ತವ್ಯ ಎಂದು ಹೇಳಿದರು.

ADVERTISEMENT

ಎನ್‌ಡಿಆರ್‌ಎಫ್‌ನ 45 ಜನ, ಎನ್‌ಡಿಆರ್‌ಎಫ್‌ನ 110 ಜನ, 8 ರಕ್ಷಣಾ ತಂಡ ಕಾರ್ಯಾಚರಣೆ ಮಾಡುತ್ತಿವೆ. ಅಗ್ನಿಶಾಮಕ ದಳದ 230 ಸಿಬ್ಬಂದಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದಾರೆ. ಕಟ್ಟಡದ ಮಾಲೀಕರ ಮೇಲೆ ನಿನ್ನೆ ರಾತ್ರಿ 304 ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದ್ದು, ಅದಕ್ಕಾಗಿ ಒಂದು ತಂಡ ರಚನೆ ಮಾಡಿ ಸದ್ಯದಲ್ಲೇ ಅವರನ್ನು ಬಂಧಿಸಲಿದ್ದೇವೆ ಎಂದರು.

ಈ ಕಾರ್ಯಾಚರಣೆಯಲ್ಲಿ ಪ್ರತಿಯೊಂದೂ ಸವಾಲಾಗುತ್ತಿವೆ. ಕೊನೆಯ ವ್ಯಕ್ತಿಯನ್ನು ರಕ್ಷಣೆ ಮಾಡುವವರೆಗೂ ಕಾರ್ಯಾಚರಣೆ ಮುಂದುವರೆಯಲಿದೆ ಎಂದರು.

ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾಧಿಕಾರಿ ದೀಪಾ ಚೋಳನ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಡಿಐಜಿ ರವಿಕಾಂತೇಗೌಡ ಹಾಗೂ ಎಸ್ಪಿ ಸಂಗೀತಾ ಜಿ. ಇದ್ದರು.

ಮೃತಪಟ್ಟವರು
1)ಸಲೀಂ ಮಕಾಂದರ್(35):ಹುಬ್ಬಳ್ಳಿ ಆನಂದನಗರ ನಿವಾಸಿ.
2)ಅಶೀತ್ ಹಿರೇಮಠ(32):ಧಾರವಾಡ ಮರಾಠಾ ಕಾಲನಿ ನಿವಾಸಿ.
3)ಮಾಬುಸಾಬ್ ರಾಯಚೂರ(48):ಹುಬ್ಬಳ್ಳಿಯ ಶಿವಶಕ್ತಿ ನಗರ ನಿವಾಸಿ.
4)ಮೆಹಬುಸಾಬ್ ದೇಸಾಯಿ(55):ಹುಬ್ಬಳ್ಳಿಯ ಆನಂದನಗರ ನಿವಾಸಿ. ಇನ್ನೊಬ್ಬ ಮೃತ ವ್ಯಕ್ತಿಯವಿವರ ಇನ್ನಷ್ಟೇ ತಿಳಿಯಬೇಕಿದೆ.

ಮೃತರ ಸಂಬಂಧಿಕರಿಂದ ದಾಖಲೆ ಪಡೆದುಕೊಂಡು,ಶವ ಪರೀಕ್ಷೆಯ ನಂತರ ಶವ ಹಸ್ತಾಂತರ ಮಾಡುವುದಾಗಿ ಜಿಲ್ಲಾ ಆಸ್ಪತ್ರೆಯಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.