ADVERTISEMENT

ಕುಣಿಗಲ್‌ ಬಳಿ ಬಸ್‌–ಲಾರಿ ಡಿಕ್ಕಿ:10 ಮಂದಿಗೆ ಬೆನ್ನು ಮೂಳೆ ಮುರಿತ, ಹಲವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2018, 5:30 IST
Last Updated 29 ಡಿಸೆಂಬರ್ 2018, 5:30 IST
ಅಪಘಾತದಲ್ಲಿ ನುಜ್ಜುಗುಜ್ಜಾದ ಸುಗಮ ಟ್ರಾವೆಲ್ಸ್ ಬಸ್ಸನ್ನು ಕ್ರೇನ್ ಮೂಲಕ ಹೆದ್ದಾರಿಯಿಂದ ತೆರವುಗೊಳಿಸಲಾಯಿತು –ಪ್ರಜಾವಾಣಿ ಚಿತ್ರ
ಅಪಘಾತದಲ್ಲಿ ನುಜ್ಜುಗುಜ್ಜಾದ ಸುಗಮ ಟ್ರಾವೆಲ್ಸ್ ಬಸ್ಸನ್ನು ಕ್ರೇನ್ ಮೂಲಕ ಹೆದ್ದಾರಿಯಿಂದ ತೆರವುಗೊಳಿಸಲಾಯಿತು –ಪ್ರಜಾವಾಣಿ ಚಿತ್ರ    

ತುಮಕೂರು: ಕುಣಿಗಲ್ ಸಮೀಪ ಆಲಪ್ಪನ ಗುಡ್ಡೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಲಾರಿ ಮತ್ತು ಸುಗಮ ಟ್ರಾವೆಲ್ಸ್ ಬಸ್ ನಡುವೆ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 28 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಲ್ಲಿ 10 ಮಂದಿಯ ಬೆನ್ನು ಮೂಳೆ ಮುರಿದಿದೆ. ಎಲ್ಲ 28 ಗಾಯಾಳುಗಳೂ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.