ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್ಆರ್ಟಿಸಿ) ಬುಧವಾರದಿಂದಲೇ ತಮಿಳುನಾಡಿಗೆ ಬಸ್ ಸಂಚಾರ ಆರಂಭಿಸಿದೆ.
ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಘೋಷಿಸಿದ ವೇಳೆಯಲ್ಲಿ ಅಂತರರಾಜ್ಯ ಬಸ್ ಸಂಚಾರ ಸ್ಥಗಿತ ಗೊಳಿಸಲಾಗಿತ್ತು. ಉಭಯ ರಾಜ್ಯಗಳ ನಡುವೆ ಬಸ್ ಸಂಚಾರಕ್ಕೆ ತಮಿಳುನಾಡು ಸಾರಿಗೆ ನಿಗಮ ಅನುಮತಿ ಕೋರಿತ್ತು. ಅಲ್ಲಿನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬುಧವಾರ ಅನುಮತಿ ನೀಡಿದರು. ಅದರ ಬೆನ್ನಲ್ಲೇ, ಕೆಎಸ್ಆರ್ಟಿಸಿ ಸಹ ಬಸ್ ಸಂಚಾರ ಆರಂಭಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.