ADVERTISEMENT

ಬಿಎಸ್‌ವೈಗೆ ಕಲ್ಲು ಎಸೆದರೆ ಪಕ್ಷಕ್ಕೆ ಪೆಟ್ಟು: ಬಿ.ವೈ ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 22:00 IST
Last Updated 27 ಜನವರಿ 2023, 22:00 IST
ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ   

ವಿಜಯಪುರ: ‘ಯಡಿಯೂರಪ್ಪ ಅವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೆ ಪೆಟ್ಟು ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬಿಎಸ್‌ವೈ ಬಗ್ಗೆ ಶಾಸಕ ಬಸನಗೌಡ ಯತ್ನಾಳ ಇನ್ನು ಟೀಕೆ ಮಾಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಯತ್ನಾಳ ಬಗ್ಗೆ ನಮಗೆ ವೈಯಕ್ತಿಕ ವಿರೋಧವಿಲ್ಲ. ನಮ್ಮ ಹೇಳಿಕೆಗಳು ಪಕ್ಷಕ್ಕೆ ಪೂರಕವಾಗಿರಬೇಕೇ ಹೊರತು ಪಕ್ಷಕ್ಕೆ ಧಕ್ಕೆ ತರುವಂತಿರಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT