ADVERTISEMENT

ಕಾಂಗ್ರೆಸಿಗರು 113 ಸ್ಥಾನ ಗೆಲ್ಲಲಿ: ಸಚಿವ ಭೈರತಿ ಬಸವರಾಜ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 19:07 IST
Last Updated 25 ಜೂನ್ 2021, 19:07 IST
ಭೈರತಿ ಬಸವರಾಜ
ಭೈರತಿ ಬಸವರಾಜ   

ತುಮಕೂರು: ‘ಕಾಂಗ್ರೆಸ್ ಪಕ್ಷದವರು ಮೊದಲು 113 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದ ನಂತರ ಮುಖ್ಯಮಂತ್ರಿ ಯಾರಾಗಬೇಕು ಎಂದು ತೀರ್ಮಾನಿಸಲಿ’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ವ್ಯಂಗ್ಯವಾಡಿದರು.

‘ಮುಖ್ಯಮಂತ್ರಿ ಯಾರಾಗಬೇಕು ಎಂದು ಚುನಾವಣೆ ನಡೆಯುವ ಮುನ್ನವೇ ಕಾಂಗ್ರೆಸ್ ನಾಯಕರು ಕಿತ್ತಾಡುತ್ತಿದ್ದಾರೆ. ಮೊದಲು ತಮ್ಮ ಪಕ್ಷದಲ್ಲಿ ಉಂಟಾಗಿರುವ ಗೊಂದಲ ಸರಿಪಡಿಸಿಕೊಂಡು, ನಂತರ ಬಿಜೆಪಿ ಬಗ್ಗೆ ಮಾತನಾಡಲಿ’ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT