ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಸೇವಿಸಿರುವ ಉಪ್ಪಿಟ್ಟು ವಿಷವಾಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ.
ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ‘ಸಚಿವರು ಸೇವಿಸಿರುವ ಆಹಾರ ವಿಷವಾಗಿರುವ ಸಾಧ್ಯತೆ ಇದೆ. ಈ ಕುರಿತು ಪರಿಶೀಲನೆಗಾಗಿ ಬೆಳಗಾವಿ ಫೋರೆನಿಕ್ಸ್ ( Forensic) ಲ್ಯಾಬ್ಗೆ ಸಚಿವರ ರಕ್ತದ ಮಾದರಿ ಹಾಗೂ ಹೊಟ್ಟೆ ಸ್ವಚ್ಛಗೊಳಿಸಿರುವ ಅಂಶವನ್ನು ಕಳುಹಿಸಲಾಗುವುದು’ ಎಂದು ಹೇಳಿದರು.
ಸಚಿವರು ಚೇತರಿಸಿಕೊಂಡಿದ್ದು, ಸಂಜೆಯೊಳಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದರು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.