ADVERTISEMENT

ಸಿಎಎ: 26ಕ್ಕೆ 58 ಸಾವಿರ ಬೂತ್‌ಗಳಲ್ಲಿ ಬಿಜೆಪಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 19:45 IST
Last Updated 19 ಜನವರಿ 2020, 19:45 IST
ಎನ್‌.ರವಿಕುಮಾರ್
ಎನ್‌.ರವಿಕುಮಾರ್   

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಕುರಿತಂತೆ ರಾಜ್ಯದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಜನಜಾಗೃತಿ ಅಭಿಯಾನ ಸೋಮವಾರ ಕೊನೆಗೊಳ್ಳ ಬೇಕಿತ್ತು, ಅದನ್ನು ಗಣರಾಜ್ಯೋತ್ಸವ ದಿನದ ತನಕ ವಿಸ್ತರಿಸಲಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದರು.

26ರಂದು ಬೆಳಿಗ್ಗೆ 9.30ರಿಂದ 10.30ರವರೆಗೆರಾಜ್ಯದ 58 ಸಾವಿರ ಬೂತುಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಸಿಎಎ ಮೂಲಕ ಲಕ್ಷಾಂತರ ಮಂದಿಗೆ ನೆಮ್ಮದಿ ತಂದುಕೊಟ್ಟ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ನೆರವೇರಿಸಲಾಗುವುದು ಹಾಗೂ ‘ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು’ ಎಂಬ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಅವರು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT