ADVERTISEMENT

11ಕ್ಕೆ ಸಂಪುಟ ವಿಸ್ತರಣೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 19:03 IST
Last Updated 7 ಆಗಸ್ಟ್ 2019, 19:03 IST
   

ಬೆಂಗಳೂರು: ಇದೇ ತಿಂಗಳು 11ರಂದು (ಭಾನುವಾರ) ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬೆಳಗಾವಿಯಲ್ಲಿ ಬುಧವಾರ ತಿಳಿಸಿದರು.

ಸಂಪುಟ ವಿಸ್ತರಣೆ ಕುರಿತು ಪಕ್ಷದ ಅಧ್ಯಕ್ಷ ಅಮಿತ್ ಶಾ ಜತೆ ಚರ್ಚಿಸಲು ದೆಹಲಿಗೆ ಹೋಗಿದ್ದ ಯಡಿಯೂರಪ್ಪ, ಸಚಿವರ ಪಟ್ಟಿಗೆ ಅಂಕಿತ ಸಿಗುವ ವಿಶ್ವಾಸದಲ್ಲಿದ್ದರು. ಭೇಟಿಗೆ ಸಮಯವೂ ನಿಗದಿಯಾಗಿತ್ತು.

ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ನಿಧನದಿಂದಾಗಿ, ಶಾ ಅವರ ಜತೆಗೆ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಲು ಮುಖ್ಯಮಂತ್ರಿಗೆ ಸಾಧ್ಯವಾಗಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.