ADVERTISEMENT

ಸಂಪುಟ ವಿಸ್ತರಣೆಯಲ್ಲಿ ಹಸ್ತಕ್ಷೇಪ ಮಾಡಲ್ಲ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 20:15 IST
Last Updated 16 ಡಿಸೆಂಬರ್ 2019, 20:15 IST
ನಳಿನ್‌ಕುಮಾರ್‌ ಕಟೀಲ್‌
ನಳಿನ್‌ಕುಮಾರ್‌ ಕಟೀಲ್‌   

ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆಯ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪರಮಾಧಿಕಾರ ಹೊಂದಿದ್ದಾರೆ. ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ಸ್ಪಷ್ಟಪಡಿಸಿದರು.

‘ಯಾರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಯಾವ ಖಾತೆ ಕೊಡಬೇಕು ಎಂಬುದನ್ನು ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಬಳಿಕ ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಎಲ್ಲ ಜಿಲ್ಲೆ ಮತ್ತು ಸಮುದಾಯಕ್ಕೆ
ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಪೌರತ್ವ (ತಿದ್ದುಪಡಿ) ಮಸೂದೆಗೆ ವಿರೋಧ ವ್ಯಕ್ತಪಡಿಸುವ ನೆಪದಲ್ಲಿ ದೇಶಕ್ಕೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಬೌದ್ಧಿಕ, ವೈಚಾರಿಕ ಹಾಗೂ ಸಂಘಟನಾತ್ಮಕವಾಗಿ ಕಾಂಗ್ರೆಸ್ ದಿವಾಳಿಯಾಗಿದೆ. ಹೀಗಾಗಿ, ರಾಷ್ಟ್ರವಿರೋಧಿ ಕೃತ್ಯದಲ್ಲಿ ಇಡೀ ಪಕ್ಷ ನಿರತವಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರು ಸೇರಿ ಯಾವುದೇ ಅಲ್ಪಸಂಖ್ಯಾತ ಸಮುದಾಯದವರಿಗೆ ತೊಂದರೆ ಇಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.