ADVERTISEMENT

ಸಂಪುಟ ವಿಸ್ತರಣೆ ವಿಳಂಬ ಶಾಸಕರ ಗೊಣಗಾಟ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 2:46 IST
Last Updated 23 ಡಿಸೆಂಬರ್ 2019, 2:46 IST
   

ಬೆಂಗಳೂರು: ಸಚಿವರಾಗಬೇಕು ಎಂಬ ಧಾವಂತದಲ್ಲಿರುವ ನೂತನ ಶಾಸಕರು ಮಂತ್ರಿಗಿರಿಯ ಕುರ್ಚಿಯಲ್ಲಿ ಕೂರಲು ಇನ್ನು ಎಷ್ಟು ದಿನ ಕಾಯಬೇಕೊ ಎಂಬ ಗೊಣಗಾಟ ಆರಂಭಿಸಿದ್ದಾರೆ.

ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಶಾಸಕರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ತಮ್ಮ ಅಸಮಾಧಾನ ಹೊರ ಹಾಕಿದರು.

‘ಶಾಸಕರಾಗಿ ಪ್ರಮಾಣ ಸ್ವೀಕರಿಸಲು ಇಷ್ಟು ದಿನ ಬೇಕಾಯಿತು. ಸಚಿವರಾಗಿ ಪ್ರಮಾಣ ತೆಗೆದುಕೊಳ್ಳಲು ಇನ್ನೆಷ್ಟು ದಿನಗಳು ಕಾಯಬೇಕೊ’ ಎಂದು ಕಿಡಿ ಕಾರಿದರು.

ADVERTISEMENT

ಸಚಿವ ಸ್ಥಾನ ಖಚಿತವಾಗಿದ್ದರೂ, ಸಂಕ್ರಾಂತಿ ಬಳಿಕವೇ ಸಚಿವ ಸಂಪುಟ ವಿಸ್ತರಣೆ ಎಂಬುದಾಗಿ ಸುಳಿವು ನೀಡಿರುವುದು ಹಲವು ಶಾಸಕರಲ್ಲಿ ನಿರಾಸೆ ಮೂಡಿಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.