ADVERTISEMENT

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 20:03 IST
Last Updated 28 ಏಪ್ರಿಲ್ 2022, 20:03 IST

ಬೆಳಗಾವಿ: ‘ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಶುಕ್ರವಾರ ದೆಹಲಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಭಾಗವಹಿಸಿ ವಾಪಸ್ ಬರುತ್ತೇನೆ’ ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಸಂಪುಟ ವಿಸ್ತರಣೆ ಕುರಿತಾಗಿ ಹೈಕಮಾಂಡ್‌ ಜೊತೆ ಚರ್ಚಿಸಿದ ನಂತರ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಅವರು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.

‘ರಾಜ್ಯದಲ್ಲಿ ಸಾರಿಗೆ ನೌಕರರು ಮತ್ತೆ ಕೈಗೊಳ್ಳುತ್ತಿರುವ ಮುಷ್ಕರದ ಬಗ್ಗೆ ಸಾರಿಗೆ ಸಚಿವರು ನೋಡಿಕೊಳ್ಳು
ತ್ತಾರೆ’ ಎಂದು ಅವರುಪ್ರತಿಕ್ರಿಯಿಸಿದರು.

ADVERTISEMENT

‘ಬೆಳಗಾವಿಯ ಸಾಂಬ್ರಾ ‌ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರಿಡುವ ಸಂಬಂಧ ಇಲ್ಲಿ‌ನ ಎಲ್ಲ ನಾಯಕರಜೊತೆ ಚರ್ಚಿಸಿ ತೀರ್ಮಾ‌ನಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.