ADVERTISEMENT

ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚುನಾವಣೆಗಳ ಬಗ್ಗೆ ಗಮನ ಹರಿಸಲು ಅಮಿತ್‌ ಶಾ, ನಡ್ಡಾ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಮೇ 2022, 19:24 IST
Last Updated 11 ಮೇ 2022, 19:24 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಆಗುವ ಸಾಧ್ಯತೆ ಇನ್ನಷ್ಟು ದೂರವಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳೂ ಸೇರಿ ಎಲ್ಲ ರೀತಿಯ ಚುನಾವಣೆಗಳಿಗೂ ಸಿದ್ಧತೆ ಮಾಡಿಕೊಳ್ಳಲು ಗಮನಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ.

ಬೊಮ್ಮಾಯಿ ನವದೆಹಲಿಯಲ್ಲಿ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆಯ ವಿಷಯವನ್ನು ಪ್ರಸ್ತಾಪಿಸಿದರು. ಆದರೆ ಅವರು ಈ ವಿಷಯಕ್ಕೆ ಹೆಚ್ಚು ಗಮನ ನೀಡಲಿಲ್ಲ ಎಂದು ಮೂಲಗಳು ಹೇಳಿವೆ.

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಸದ್ಯವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಾಗಿರುವುದರಿಂದ ಆ ಬಗ್ಗೆ ಗಮನ ಹರಿಸುವಂತೆ ಅಮಿತ್‌ ಶಾ ಅವರು ಸೂಚಿಸಿದ್ದು, ‘ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ಚಿಂತೆ ಬಿಡಿ’ ಎಂದು ಬೊಮ್ಮಾಯಿ ಅವರಿಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.