ADVERTISEMENT

ಮಾಸಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ : ಬಿಎಸ್ ವೈ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 8:42 IST
Last Updated 27 ಜನವರಿ 2020, 8:42 IST
ಕೊಡಗಿನಲ್ಲಿ ಗೌರವ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕೊಡಗಿನಲ್ಲಿ ಗೌರವ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಹಾಸನ: ಮಾಸಾಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಹೊಳೆನರಸೀಪುರ ತಾಲ್ಲೂಕಿನ ಸಿಂಗನಕುಪ್ಪೆ ಗ್ರಾಮದ ಹೆಲಿಪ್ಯಾಡ್‌‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ದಾವೋಸ್ ಭೇಟಿ‌ ಅತ್ಯಂತ ಫಲಪ್ರದವಾಗಿದೆ. ರಾಜ್ಯದಲ್ಲಿ ಅನೇಕರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಹಲವು ಕೈಗಾರಿಕೋದ್ಯಮಿಗಳು ರಾಜ್ಯಕ್ಕೆ ಬರಲು ಒಪ್ಪಿದ್ದಾರೆ ಎಂದರು. 40ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿನಂತಿಸಿದ್ದೇನೆ ಎಂದು ಹೇಳಿದರು

ಎಸ್.‌ಎಂ.ಕೃಷ್ಣ ಅವರ ನಂತರ 16 ವರ್ಷಗಳು ಕಳೆದ ಮೇಲೆ ತಾವು ದಾವೋಸ್‌ಗೆ ಹೋಗಿದ್ದು ತುಂಬಾ ಉಪಯುಕ್ತವಾಯಿತು‌. ಬಹಳ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಅಭಿವೃದ್ಧಿ ಮಾಡಲು ಭರವಸೆ ದೊರೆತಿದೆ. ಇದರಿಂದಕೃಷಿ, ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲೂ ಅನುಕೂಲ ಆಗಲಿದೆ ಎಂದರು.

ADVERTISEMENT

ಮೈಸೂರು ಜಿಲ್ಲೆಯ ದೇವಿತಂದ್ರೆ ಗ್ರಾಮದಲ್ಲಿ ದೇವಾಲಯದ ರಾಜಗೋಪುರ ಉದ್ಘಾಟನೆ ಮುಗಿಸಿ, ಕೊಡಗಿಗೆ ತೆರಳುವುದಾಗಿ ಹೇಳಿದ ಅವರು ಕೊಡಗಿನಲ್ಲಿ 1500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.