ADVERTISEMENT

ಸಂಪುಟ ವಿಸ್ತರಣೆ: ಬಿಎಸ್‌ವೈ ಸಭೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 5:35 IST
Last Updated 19 ಆಗಸ್ಟ್ 2019, 5:35 IST
   

ಬೆಂಗಳೂರು: ಸಂಪುಟ ವಿಸ್ತರಣೆಗೆ ಇನ್ನು ಒಂದು ದಿನವಷ್ಟೇ ಬಾಕಿ ಇದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಲವರೊಂದಿಗೆ ಸಮಾಲೋಚನೆ ನಡೆಸಲಾರಂಭಿಸಿದ್ದಾರೆ.

ಸೋಮವಾರ ಬೆಳಿಗ್ಗೆಯೇ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಶಾಸಕರಾದ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ ಸಹಿತ ಹಲವರೊಂದಿಗೆ ಸಮಾಲೋಚನೆ ನಡೆಸಿದರು.

ಮತ್ತೊಂದೆಡೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಲವು ಶಾಸಕರಿಗೆ ಇದುವರೆಗೂ ತಾವು ಪಟ್ಟಿಯಲ್ಲಿ ಇರುವ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಅವರು ಸಹ ಗೊಂದಲದಲ್ಲೇ ಇದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

ಸಚಿವ ಸ್ಥಾನ ಸಿಗದಿದ್ದರೆ ಚಿಂತೆ ಮಾಡಬೇಡಿ, ಸರ್ಕಾರ ರಚನೆಗೊಂಡ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸುಧಾರಿಸಿಕೊಂಡು ಸಹಕರಿಸಬೇಕು ಎಂದು ಮನವೊಲಿಸುವ ಭಾಗವಾಗಿ ಮುಖ್ಯಮಂತ್ರಿ ಅವರು ಹೈಕಮಾಂಡ್ ನಿಂದ ಪಟ್ಟಿ ಬರುವುದಕ್ಕೆ ಮೊದಲಾಗಿ ಸಮಾಲೋಚನಾ ಸಭೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.