ADVERTISEMENT

ಸಂಚಾರ ನಿರ್ವಹಣೆಗೆ ‘ಜೈಕ’ ನೆರವು: ಸಂಪುಟ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2020, 19:45 IST
Last Updated 28 ಡಿಸೆಂಬರ್ 2020, 19:45 IST

ಬೆಂಗಳೂರು: ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚು ಇರುವ ರಸ್ತೆಗಳಲ್ಲಿ ಜಪಾನ್‌ ಇಂಟರ್‌ ನ್ಯಾಷನಲ್‌ ಕೋಆಪರೇಷನ್‌ ಏಜೆನ್ಸಿ(ಜೈಕ) ನೆರವಿನೊಂದಿಗೆ ಸುಧಾರಿತ ಸಂಚಾರ ಮಾಹಿತಿ ಮತ್ತು ನಿರ್ವಹಣೆ ವ್ಯವಸ್ಥೆಯನ್ನು ಜಾರಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ಯೋಜನೆ ಕಳೆದ ಎರಡು ವರ್ಷಗಳಿಂದ ನನೆಗುದಿಯಲ್ಲಿತ್ತು. ಜೈಕ ನೆರವಿನೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ರಾಜ್ಯ ಸರ್ಕಾರ 2018 ರಲ್ಲಿ ‘ಜೈಕ’ ಜತೆಗೆ ಒಪ್ಪಂದಕ್ಕೆ ಸಹಿ ಮಾಡಿತ್ತು.

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಗರದ 29 ಕಡೆಗಳಲ್ಲಿ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲಾಗುವುದು. ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಮತ್ತು ಸಂಚಾರ ನಿಬಿಡ ರಸ್ತೆಗಳಲ್ಲಿ ವಾಹನಗಳು ಸುಗಮವಾಗಿ ಸಾಗಲು ಅನುಕೂಲ ಮಾಡುವ ಯೋಜನೆ ಇದಾಗಿದೆ. ವಾಹನಗಳ ದಟ್ಟಣೆ ಕಡಿಮೆ ಆಗಲಿದ್ದು, ಅವುಗಳ ಸಂಚಾರದ ಸರಾಸರಿ ವೇಗವೂ ಹೆಚ್ಚಲಿದೆ. ₹70 ಕೋಟಿ ವೆಚ್ಚದ ಈ ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.