ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವೈಫಲ್ಯ ಅನುಭವಿಸಿರುವುದಕ್ಕೆ ಆರೋಗ್ಯ ಸಚಿವರ ಬದಲಾವಣೆಯು ಸಾಕ್ಷಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ಕೋವಿಡ್–19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಈ ಸರ್ಕಾರದ ವಿಫಲವಾಗಿದೆ ಎಂಬುದಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಡಿರುವ ಸಂಪುಟ ಪುನರಚನೆಯೇ ಸಾಕ್ಷಿ. ಕೋವಿಡ್ ನಿಭಾಯಿಸುವಲ್ಲಿನ ಸರ್ಕಾರದ ಅಸಮರ್ಥತೆಯು ಅಪಾರ ಜೀವ, ಜೀವನವನ್ನು ಕಸಿದಿದೆ ಎಂಬ ಕಾಂಗ್ರೆಸ್ನ ಆರೋಪಕ್ಕೆ ಆರೋಗ್ಯ ಸಚಿವರ ಬದಲಾವಣೆಯು ಪುಷ್ಟಿ ನೀಡಿದೆ,’ ಎಂದಿದ್ದಾರೆ.
ಕೋವಿಡ್ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಹಲವು ಕೋಟಿ ಮೊತ್ತದ ಭ್ರಷ್ಟಾಚಾರದ ಆರೋಪವನ್ನೂ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.