ADVERTISEMENT

ರಸಪ್ರಶ್ನೆ: ಜಟ್ಟಪ್ಪಗೆ ಮೊದಲ ಸ್ಥಾನ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 12:44 IST
Last Updated 14 ಆಗಸ್ಟ್ 2021, 12:44 IST

ಬೆಂಗಳೂರು: ಕೆನರಾ ಬ್ಯಾಂಕ್‌ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಎಂ.ಜಟ್ಟಪ್ಪ ಪ್ರಥಮ ಬಹುಮಾನ ಗಳಿಸಿದ್ದಾರೆ.

ರಾಷ್ಟ್ರೀಯ ಭಾವೈಕ್ಯತೆ ಮತ್ತು ಸೌಹಾರ್ದತೆಯನ್ನು ಸಾರುವ ಮತ್ತು ಜನರಲ್ಲಿ ಈ ಭಾವನೆಗಳನ್ನು ಬಿತ್ತುವ ಉದ್ದೇಶದಿಂದ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ದ್ವಿತೀಯ ಬಹುಮಾನ ಎಚ್‌.ಶಿವಶಂಕರ್‌ ಅವರ ಪಾಲಾಯಿತು. ಎನ್‌.ಚಂದ್ರಕಾಂತ್‌, ಜಿ.ಅಜಿತ್‌ಕುಮಾರ್‌, ಆದಿತ್ಯ ಗೌಡ ಮತ್ತು ಆರ್‌.ರಮ್ಯ ಅವರು ತೃತೀಯ ಬಹುಮಾನ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.