ADVERTISEMENT

ಕಾರು ಪಲ್ಟಿ; ಖಾನಾಪುರ ಶಾಸಕಿ ಅಂಜಲಿ ತಲೆಗೆ ಪೆಟ್ಟು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 7:36 IST
Last Updated 13 ಏಪ್ರಿಲ್ 2019, 7:36 IST
ಅಂಜಲಿ ನಿಂಬಾಳ್ಕರ
ಅಂಜಲಿ ನಿಂಬಾಳ್ಕರ   

ಬೆಳಗಾವಿ: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ತೆರಳುತ್ತಿದ್ದಾಗ ಶುಕ್ರವಾರ ಸಂಜೆ ಸೋಲ್ಲಾಪುರ ಸಮೀಪ ಕಾರು ಪಲ್ಟಿಯಾಗಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರ ತಲೆಗೆ ಪೆಟ್ಟಾಗಿದೆ. ಸೋಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ.

ಚುನಾವಣಾ ಪ್ರಚಾರ ಕೈಗೊಳ್ಳಲು ಮಹಾರಾಷ್ಟ್ರದ ನಾಂದೇಡಕ್ಕೆ ಅವರು ಕಾರಿನಲ್ಲಿ ತೆರಳುತ್ತಿದ್ದರು. ಸೋಲ್ಲಾಪುರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಹೆಚ್ಚಿನ ಗಾಯಗಳಾಗಿಲ್ಲ. ಅಂಜಲಿ, ಕಾರು ಚಾಲಕ ಮಹಾದೇವ ಹಾಗೂ ಅಂಗರಕ್ಷಕ ಸಯ್ಯದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಆರೋಗ್ಯ ಸ್ಥಿರವಾಗಿದೆ ಎಂದು ಸಮೀಪವರ್ತಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT