ADVERTISEMENT

ಗೋವಾದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಶಾಸಕ ಅರವಿಂದ ಬೆಲ್ಲದ ಕಾರು ಅಪಘಾತ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 14:16 IST
Last Updated 25 ಫೆಬ್ರುವರಿ 2020, 14:16 IST
 ಖಾನಾಪುರ ತಾಲ್ಲೂಕು ಬೈಲೂರು ಕ್ರಾಸ್ ಬಳಿ ಶಾಸಕ ಅರವಿಂದ ಬೆಲ್ಲದ ಅವರ ಕಾರು ಪಲ್ಟಿಯಾಗಿರುವುದು
ಖಾನಾಪುರ ತಾಲ್ಲೂಕು ಬೈಲೂರು ಕ್ರಾಸ್ ಬಳಿ ಶಾಸಕ ಅರವಿಂದ ಬೆಲ್ಲದ ಅವರ ಕಾರು ಪಲ್ಟಿಯಾಗಿರುವುದು   

ಖಾನಾಪುರ: ಗೋವಾದಿಂದ ಹುಬ್ಬಳ್ಳಿಯತ್ತ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿದ್ದ ಕಾರು ಜಾಂಬೋಟಿ ಸಮೀಪದ ಬೈಲೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.

ಬೆಲ್ಲದ ಮತ್ತು ಅವರ ಸ್ನೇಹಿತರು ಸೇರಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಏರ್ ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಕಾರು ರಸ್ತೆ ಬದಿಯ ತಡೆಗೋಡೆಗೆ ತಾಗಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರು ಹಾಗೂ ಪ್ಯಾಟ್ರೋಲಿಂಗ್‌ನಲ್ಲಿದ್ದ (ಗಸ್ತು)ಪೊಲೀಸರು, ಕಾರಿನಲ್ಲಿದ್ದವರನ್ನು ಹೊರಗೆ ತೆಗೆದು ಬೇರೊಂದು ವಾಹನದಲ್ಲಿ ಕಳುಹಿಸಿಕೊಟ್ಟಿದ್ದಾರೆ.

ADVERTISEMENT

ಖಾನಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.