ADVERTISEMENT

ಜಾತಿವಾರು ಸಮೀಕ್ಷೆ ವೇಳೆ ಮಾಹಿತಿ ಹಂಚಿಕೊಳ್ಳಲು ಸುಧಾಮೂರ್ತಿ ನಿರಾಕರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಅಕ್ಟೋಬರ್ 2025, 4:52 IST
Last Updated 16 ಅಕ್ಟೋಬರ್ 2025, 4:52 IST
<div class="paragraphs"><p>ಸುಧಾಮೂರ್ತಿ</p></div>

ಸುಧಾಮೂರ್ತಿ

   

ಬೆಂಗಳೂರು: ಕರ್ನಾಟಕ ಸರ್ಕಾರದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಗಣತಿ) ವೇಳೆ ಮಾಹಿತಿ ನೀಡಲು ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ನಿರಾಕರಿಸಿದ್ದಾರೆ. ಅಲ್ಲದೆ ಸಮೀಕ್ಷೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಸ್ವಯಂ ಘೋಷಣೆ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಜಯನಗರದಲ್ಲಿ ಇರುವ ಸುಧಾ ಮೂರ್ತಿಯವರ ಮನೆಗೆ ಕಳೆದ ವಾರ ಗಣತಿದಾರರು ಭೇಟಿ ನೀಡಿದ್ದರು.

ADVERTISEMENT

‘ನಾವು ಹಿಂದುಳಿದ ವಿಭಾಗಕ್ಕೆ ಸೇರಿದವರಲ್ಲ. ಹೀಗಾಗಿ ಈ ಸಮೀಕ್ಷೆಯಲ್ಲಿ ‍ಪಾಲ್ಗೊಳ್ಳುವುದರಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹೀಗಾಗಿ ಪಾಲ್ಗೊಳ್ಳುವುದಿಲ್ಲ’ ಎಂದು ಘೋಷಣಾ ಪತ್ರದಲ್ಲಿ ಬರೆದಿದ್ದಾರೆ.

ಬೆಂಗಳೂರು ನಗರದಲ್ಲಿ ಸದ್ಯ ಶೇ 81ರಷ್ಟು ಮನೆಗಳ ಸಮೀಕ್ಷೆ ಮುಗಿದಿದ್ದು, ಎಷ್ಟು ಮಂದಿ ‍ಪಾಲ್ಗೊಳ್ಳಲು ನಿರಾಕರಿಸಿದ್ದಾರೆ ಎನ್ನುವುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಪ್ರಜಾವಾಣಿಗೆ ಸಿಕ್ಕಿದ ಮಾಹಿತಿ ಪ್ರಕಾರ ಸಮೀಕ್ಷೆಯಲ್ಲಿ ಪಾಲ್ಗೊಂಡವರು ಶೇ 25 ರಷ್ಟು ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.