ADVERTISEMENT

ಕಾವೇರಿ ನಿಗಮ: ಶಂಕರೇಗೌಡಗೆ ಹೊಣೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 19:45 IST
Last Updated 2 ಜೂನ್ 2022, 19:45 IST

ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೊಣೆಯನ್ನು ಹೆಚ್ಚುವರಿ ಪ್ರಭಾರ ಆಗಿ ನಿಗಮದ ಮೈಸೂರು ವಿಭಾಗದ ಮುಖ್ಯ ಎಂಜಿನಿಯರ್‌ (ನೀರಾವರಿ ವಲಯ – ದಕ್ಷಿಣ) ಶಂಕರೇಗೌಡ ಅವರಿಗೆ
ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ. ಜೈಪ್ರಕಾಶ್‌ ಅವರು ಮೇ 31ರಂದು ನಿವೃತ್ತರಾಗಿದ್ದರು. ಅವರು ನಿವೃತ್ತಿಯಾದ ತಕ್ಷಣವೇ ಹುದ್ದೆಯ ಹೊಣೆಯನ್ನು ಮತ್ತೊಬ್ಬ ಅಧಿಕಾರಿಗೆ ವಹಿಸದಿರುವ ಬಗ್ಗೆ ನಿಗಮದಲ್ಲಿ ಅಪಸ್ವರ ಕೇಳಿಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT