ADVERTISEMENT

ಇದೇ 23ರಂದು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಿಬಿಐ ಸಮನ್ಸ್‌

ಏಜೆನ್ಸೀಸ್
Published 21 ನವೆಂಬರ್ 2020, 12:01 IST
Last Updated 21 ನವೆಂಬರ್ 2020, 12:01 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌    

ಬೆಂಗಳೂರು: ನವೆಂಬರ್‌ 23ರಂದು ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಸಮನ್ಸ್‌ ಜಾರಿಗೊಳಿಸಿದೆ.

ಅಕ್ಟೋಬರ್‌ 5 ರಂದು ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಜೊತೆಗೆ, ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.

ಸಿಬಿಐ ಸಮನ್ಸ್‌ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್ 25ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.