ADVERTISEMENT

ರೇವಣಸಿದ್ದೇಶ್ವರರ ಜಯಂತಿ ಆಚರಿಸಿ: ಕಾಗಿನೆಲೆ ಶ್ರೀ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 19:39 IST
Last Updated 28 ಮಾರ್ಚ್ 2022, 19:39 IST
ನಿರಂಜನಾನಂದಪುರಿ ಸ್ವಾಮೀಜಿ
ನಿರಂಜನಾನಂದಪುರಿ ಸ್ವಾಮೀಜಿ   

ಹರಿಹರ: ‘ಶ್ರೀ ರೇಣುಕಾಚಾರ್ಯರ ಜಯಂತಿ ಬದಲು ಶ್ರೀ ರೇವಣ ಸಿದ್ದೇಶ್ವರ ಜಯಂತಿ ಆಚರಿಸಬೇಕು’ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರವನ್ನು ಭಾನುವಾರ ಆಗ್ರಹಿಸಿದ್ದಾರೆ.

ತಾಲ್ಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠದಲ್ಲಿ ಶಾಖಾ ಮಠದ 6ನೇ ವಾರ್ಷಿಕೋತ್ಸವ ಹಾಗೂ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಶ್ರೀ ರೇವಣಸಿದ್ದೇಶ್ವರ ಜಯಂತಿ ಆಚರಿಸಲು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಸಚಿವರ ಮೂಲಕ ಮನವಿ ಸಲ್ಲಿಸಿದ್ದೇನೆ. ಏಕೆ ಈ ಆಗ್ರಹ ಎಂದು ಸಮಯ ಬಂದಾಗ ನೀಡುತ್ತೇನೆ. ಈಗ ವಿವಾದ ಮಾಡುವುದು ಬೇಡ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT