ADVERTISEMENT

ಅನಂತಕುಮಾರ ವ್ಯಕ್ತಿಯಲ್ಲ, ಶಕ್ತಿಯಾಗಿದ್ದರು: ಸಚಿವ ಡಿ.ವಿ.ಸದಾನಂದಗೌಡ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2018, 4:42 IST
Last Updated 12 ನವೆಂಬರ್ 2018, 4:42 IST
   

ಕಲಬುರ್ಗಿ: ಕೇಂದ್ರ ಸಚಿವ ಅನಂತಕುಮಾರ ನಿಧನ ದೊಡ್ಡ ದುರಂತ. ನನಗೆ ಅತ್ಯಂತ ದುಖಃವಾಗಿದೆ. ಅವರು ವ್ಯಕ್ತಿಯಲ್ಲ, ಓರ್ವ ಶಕ್ತಿಯಾಗಿದ್ದರು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಗ್ಯದ ಕಡೆ ಗಮನ ಕೊಡದೇ ನಿರಂತರವಾಗಿ ಕೆಲಸದಲ್ಲಿ ತೊಡಗುತ್ತಿದ್ದರು. ಅತಿಯಾದ ಕೆಲಸದ ಒತ್ತಡವೇ ಅವರ ನಿಧನಕ್ಕೆ ಕಾರಣ ಎನ್ನಬಹುದು. 30 ವರ್ಷಗಳಿಂದ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದೆ’ ಎಂದು ಭಾವುಕರಾಗಿ ನುಡಿದರು.

9 ವರ್ಷ ಸುದೀರ್ಘವಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕೆಲಸ ಮಾಡಿದ್ದರು. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದರು.

ADVERTISEMENT

ಇಲ್ಲಿನಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಹೈದರಾಬಾದ್ ಮೂಲಕ ಬೆಂಗಳೂರಿಗೆ ತೆರಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.