ADVERTISEMENT

ಚಾಮುಂಡಿ ಬೆಟ್ಟ, ಕೊಡಚಾದ್ರಿ ಸೇರಿ 15 ಕಡೆ ರೋಪ್‌ವೇ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 3:14 IST
Last Updated 9 ಫೆಬ್ರುವರಿ 2023, 3:14 IST
   

ನವದೆಹಲಿ: ಉಡುಪಿ ಜಿಲ್ಲೆಯ ಕೊಡಚಾದ್ರಿ ಪರ್ವತದಲ್ಲಿ ರೋಪ್‌ವೇ ಯೋಜನೆ ಆರಂಭಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗಿದೆ. ಉಳಿದ 14 ಬೆಟ್ಟಗಳಲ್ಲಿ ಈ ಯೋಜನೆಯ ಆರಂಭಕ್ಕೆ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ ಮಾಡಲಾಗಿದೆ ಎಂದು ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಬುಧವಾರ ಸದಸ್ಯ ನಾರಾಯಣ ಕೊರಗಪ್ಪ
ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಕರ್ನಾಟಕ ಸರ್ಕಾರವು 15 ಯೋಜನೆಗಳ ಪ್ರಸ್ತಾವ ಕಳುಹಿಸಿದೆ’ ಎಂದು ತಿಳಿಸಿದ್ದಾರೆ.

ಈ ಸಲದ ಕೇಂದ್ರ ಬಜೆಟ್‌ನಲ್ಲಿ ಪರ್ವತಮಾಲಾ ಯೋಜನೆಯನ್ನು ಪ್ರಕಟಿಸಲಾಗಿದೆ. ಈ ಯೋಜನೆಯ ಆರಂಭವಾದರೆ ಗುಡ್ಡಗಾಡು ಪ್ರದೇಶಗಳಿಗೆ ಜನರ ಸುಲಲಿತ ಪ್ರಯಾಣಕ್ಕೆ ಅನುಕೂಲವಾಗಲಿದೆ. ರೋಪ್‌ವೇ ಯೋಜನೆಗಳಿಗಾಗಿ ಸಾಮಾನ್ಯ ಕಾರ್ಯಾಚರಣೆಯ ವಿಧಾನವನ್ನು ಅಭಿವೃದ್ಧಿಪಡಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸಚಿವಾಲಯ ಈಗಾಗಲೇ ನಿರ್ದೇಶನ ನೀಡಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಎಲ್ಲೆಲ್ಲಿ ರೋಪ್‌ವೇ ಪ್ರಸ್ತಾವ: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟ, ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ, ಕೆಮ್ಮಣ್ಣು ಗುಂಡಿ, ಮೈಸೂರಿನ ಚಾಮುಂಡಿ ಬೆಟ್ಟ, ಉಡುಪಿ ಜಿಲ್ಲೆಯ ಕೊಡಚಾದ್ರಿ ಪರ್ವತ, ತುಮಕೂರಿನ ದೇವರಾಯನ ದುರ್ಗ, ಮಧುಗಿರಿ ಕೋಟೆ, ಕೊಪ್ಪಳದ ಅಂಜನಾದ್ರಿ ಬೆಟ್ಟ, ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ, ಸಾಗರ ಹಿನ್ನೀರು, ಉತ್ತರ ಕನ್ನಡದ ಯಾಣ, ಜೋಯ್ಡಾ ಹಾಗೂ ಚಪೇಲಿ, ಕೊಡಗು ಜಿಲ್ಲೆಯ ಕುಮಾರ ಪರ್ವತ, ಬೆಳಗಾವಿ ಜಿಲ್ಲೆಯ ರಾಜ್‌ಹೌಸ್‌ಗಡ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.