ADVERTISEMENT

ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 28 ಮೇ 2023, 4:53 IST
Last Updated 28 ಮೇ 2023, 4:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವೆಡೆ ಭಾನುವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರಲಿದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇದೇ 29ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರದ ಬಳಿಕ ಮಳೆಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT