ADVERTISEMENT

ಚಂದ್ರಶೇಖರ್‌ ಸಾವಿನ ಪ್ರಕರಣ: ಪೂರ್ಣ ತನಿಖೆ ಮುಗಿಯದೇ ನಿರ್ಧಾರಕ್ಕೆ ಬರಬೇಡಿ -ಸಿಎಂ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 19:46 IST
Last Updated 9 ನವೆಂಬರ್ 2022, 19:46 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್‌ ಸಾವಿನ ಪ್ರಕರಣದ ಕುರಿತು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಬೇಕು. ಅಲ್ಲಿಯವವರೆಗೆ ಪೊಲೀಸರು ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಹೊನ್ನಾಳಿಯಲ್ಲಿನ ರೇಣುಕಾಚಾರ್ಯ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.‌

‘ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ. ರೇಣುಕಾಚಾರ್ಯ ಸಹೋದರನಾಗಿ ಬಂದಿದ್ದೇನೆ. ಅವರ ಜತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಆದರೂ ಮನಸ್ಸು ತಡೆಯಲಾರದೇ ಬಂದಿದ್ದೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.