ADVERTISEMENT

ಸರಳ ವಾಸ್ತು ಚಂದ್ರಶೇಖರ್ ಗುರೂಜಿಗೆ 40 ಬಾರಿ ಚಾಕು ಇರಿತ!

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 10:21 IST
Last Updated 5 ಜುಲೈ 2022, 10:21 IST
ಕೊಲೆಯಾದ ಚಂದ್ರಶೇಖರ್ ಗುರೂಜಿ
ಕೊಲೆಯಾದ ಚಂದ್ರಶೇಖರ್ ಗುರೂಜಿ   

ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗೂರುಜಿ ಅವರ ಎದೆಯ ಭಾಗಕ್ಕೆ 35 ರಿಂದ 40 ಕಡೆಗಳಲ್ಲಿ ಚಾಕುವಿನಿಂದ ದುಷ್ಮರ್ಮಿಗಳು ಇರಿದಿದ್ದ, ಕುತ್ತಿಗೆ ಬಲ ಭಾಗವನ್ನು ಕತ್ತರಿಸಿದ್ದಾರೆ. ಇದೊಂದು ಭೀಕರವಾದ ಹತ್ಯೆ ಎಂಬುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದು ಬರುತ್ತಿದೆ.

ಹತ್ಯೆ ಸುದ್ದಿ ನಗರದಲಿ ಹರಡುತ್ತಿದ್ದಂತೆ ಅವರ ಅಭಿಮಾನಿಗಳು ಹಾಗೂ ಸಂಬಂಧಿಗಳು ದೌಡಾಯಿಸಿ‌ ಶವ ಇಟ್ಟಿರುವ ಕೆಎಂಸಿ ಆಸ್ಪತ್ರೆ ಕಡೆಗೆ ಬರುತ್ತಿದ್ದಾರೆ.

ಹತ್ಯೆ ಗುಂಪಿನಲ್ಲಿ ಇದ್ದ ವ್ಯಕ್ತಿಯೊಬ್ನ ಗೂರುಜಿ ಕಾಲಿಗೆ ಬಿದ್ದು ನಮಸ್ಕಾರ ಮಾಡುತ್ತಿದ್ದಂತೆ ಮತ್ತೊಬ್ನ ವ್ಯಕ್ತಿ ಅವರ ಎದೆಗೆ ಇರಿದ್ದಾನೆ. ಅವರುನೆಲಕ್ಕೆ ಬೀಳುತ್ತಿಂದಂತೆ ಮತ್ತೊಬ್ಬ ವ್ಯಕ್ತಿ ಕೂಡ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ. ಜತೆಗೆ ಕುತ್ತಿಗೆಯ ಬಲಭಾಗ ಕತ್ತರಿಸುವಂತೆ ಚಾಕೂವಿನಿಂದ ಇರಿಯಲಾಗಿದೆ.

ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆದಿರುವ ಸುದ್ದಿಗಳು ಅವರ ಕೊಲೆಯ ನಂತರ ಹರಿದಾಡುತ್ತಿವೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಪೊಲೀಸ್ ಆಯುಕ್ತ ಲಾಭೂರಾಮ್ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೊಲೆ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಲಾಗಿದೆ ಎಂದು ತಿಳಿದು ಬಂದಿದೆ.ಕೆಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.

ಗುರೂಜಿ ಯಾರು?

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲತಃ ಬಾಗಲಕೋಟೆ ನಗರದ ಮೋಟಗಿ ಗಲ್ಲಿಯ ನಿವಾಸಿಯಾಗಿದ್ದರು.ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದರು. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಿವಾಸ ಹೊಂದಿದ್ದರು.

ಮೋಟಗಿ ಗಲ್ಲಿಯ ವಿರೂಪಾಕ್ಷಪ್ಪ ಅಂಗಡಿ, ನೀಲವ್ವ‌ ಅಂಗಡಿಯವರ ಪುತ್ರನಾಗಿದ್ದ ಗುರೂಜಿ, ಆರು ಮಂದಿ ಮಕ್ಕಳಲ್ಲಿ ಚಂದ್ರಶೇಖರ ಮೂರನೇಯವರಾಗಿದ್ದರು.

ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮುಗಿಸಿನೌಕರಿ ಅರಸಿ ಅವರು ಮೂರೂವರೆ ದಶಕಗಳ ಹಿಂದೆ ಮುಂಬಯಿಗೆ ತೆರಳಿದ್ದರು. ಆರಂಭದಲ್ಲಿ ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಅವರು, ನಂತರ ಸರಳ ವಾಸ್ತು ಆರಂಭಿಸಿದ್ದರು. ಮುಂಬಯಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ವಾಸಿಸುತ್ತಿದ್ದರು.

ಸರಳ ವಾಸ್ತು ಪ್ರವರ್ಧಮಾನಕ್ಕೆ ಬಂದ ನಂತರ ವಾಸ್ತುಪ್ರಿಯರಲ್ಲಿ ಜನಪ್ರಿಯತೆ ಗಳಿಸಿದ್ದ ಇವರು, ಒಬ್ಬ ಸ್ಟಾರ್ ವಾಸ್ತು ತಜ್ಞ ಎನ್ನಲಾಗುತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.