ಕೆ.ಆರ್.ಪೇಟೆ ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಅವರಿಗೆ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಬಿ ಪಾರ್ಮ್ ನೀಡಿ ಆಶೀರ್ವದಿಸಿದರು.
ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಜಿ.ಪಂ. ಸದಸ್ಯರೂ ಆಗಿರುವ ಬಿ.ಎಲ್.ದೇವರಾಜು ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ನಾರಾಯಣಗೌಡ ಅವರು ಸ್ಪರ್ಧಿಸಿದ್ದು, ಅಧಿಕೃತವಾಗಿ ಬಿ ಫಾರಂ ಪಡೆದುಕೊಂಡಿದ್ದಾರೆ. ಮೂಲ ಜೆಡಿಎಸ್ನಲ್ಲಿಯೇ ಇದ್ದ ನಾರಾಯಣಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ವಿಜಯಿಯಾಗಿದ್ದರು. ನಂತರ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಸೋಮವಾರ ಅಭ್ಯರ್ಥಿ ನಾರಾಯಣಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ನಾಮಪತ್ರ ಸಲ್ಲಿಸಲಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಕೆ.ಸಿ.ನಾರಾಯಣಗೌಡ ಸೇರ್ಪಡೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.