ರಾಮನಗರ: ಜರ್ಮನಿಯಿಂದ ಚನ್ನಪಟ್ಟಣಕ್ಕೆ ಹಿಂದಿರುಗಿದ ವಿದ್ಯಾರ್ಥಿನಿಯೊಬ್ಬರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆ ಮತ್ತು ಆಕೆಯ ತಂದೆತಾಯಿಯ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ವಿದ್ಯಾಭ್ಯಾಸಕ್ಕೆಂದು ಜರ್ಮನಿಗೆ ತೆರಳಿದ್ದ ಯುವತಿ ಚನ್ನಪಟ್ಟಣ ನಗರ ವ್ಯಾಪ್ತಿಯ ನಿವಾಸಿ. 2 ದಿನಗಳ ಹಿಂದೆಯಷ್ಟೇ ಹಿಂದಿರುಗಿದ್ದರು. ಭಾನುವಾರ ಸಂಜೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ತಕ್ಷಣ ಜಾಗೃತರಾದ ಅಧಿಕಾರಿಗಳು ಆಕೆಯನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಕರೆ ತಂದು ತಪಾಸಣೆ ಮಾಡಿಸಿದ್ದಾರೆ.
ಸೋಮವಾರ ಬೆಳಿಗ್ಗಿನಿಂದಲೇ ವಿದ್ಯಾರ್ಥಿನಿ ಜತೆಗೆ ಆಕೆಯ ಸಂಪರ್ಕದಲ್ಲಿದ್ದ ಪೋಷಕರ ಪರೀಕ್ಷೆಯು ನಡೆಯಿತು. ಜಿಲ್ಲಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಟಲ ದ್ರವ ಪರೀಕ್ಷೆ ಸಹ ನಡೆದಿದೆ. ಜ್ವರ ಬಿಟ್ಟರೆ, ಕೋವಿಡ್-19 ಸೋಂಕು ಇನ್ನಿತರ ಲಕ್ಷಣಗಳು ಈಕೆಯಲ್ಲಿಲ್ಲ ಎನ್ನಲಾಗುತ್ತಿದೆ. ಆದರೂ ಜರ್ಮನಿಯಿಂದ ದೇಶಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ರೋಗ ಲಕ್ಷಣಗಳನ್ನು ಆಧರಿಸಿ ಕೋವಿಡ್-19 ವೈರಸ್ ಸೋಂಕು ತಪಾಸಣೆಗೆಂದು ಆಕೆಯ ರಕ್ತ ಮಾದರಿ ಹಾಗೂ ತಂದೆತಾಯಿಯವರ ರಕ್ತ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದು, ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿದ್ದಾರೆ. ವರದಿ ಬರಲು ಕನಿಷ್ಠ 24 ಗಂಟೆ ಕಾಲಾವಕಾಶ ಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್ ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.