ADVERTISEMENT

ಚನ್ನರಾಯಪಟ್ಟಣ: ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 7:27 IST
Last Updated 29 ಮಾರ್ಚ್ 2020, 7:27 IST
   
""

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಮಂಚನಹಳ್ಳಿಯಲ್ಲಿ ಹೋಂ ಕ್ವಾರಂಟೈನ್ ನಲ್ಲಿದ್ದ‌ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂರು ದಿನಗಳ ಹಿಂದೆ ಮುಂಬೈ ನಿಂದ ಬಂದಿದ್ದ 52 ವರ್ಷದ ವ್ಯಕ್ತಿ ಯ ಆರೋಗ್ಯ ತಪಾಸಣೆನಡೆಸಿ
14 ದಿನ ಪ್ರತ್ಯೇಕವಾಗಿ ಇರುವಂತೆ ವೈದ್ಯರು ಸೂಚಿಸಿದ್ದರು.

ಶನಿವಾರ ಮಧ್ಯರಾತ್ರಿ ಮನೆಯಿಂದ ಹೊರ ಬಂದು ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಅಸ್ತಮಾ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ADVERTISEMENT

ಪತ್ನಿ ಹಾಗೂ ಮಕ್ಕಳನ್ನ ಮುಂಬೈನಲ್ಲಿ ಬಿಟ್ಟು ಒಬ್ಬರೇ ಊರಿಗೆ ಬಂದಿದ್ದರು.

ಶ್ರವಣಬೆಳಗೊಳ ಪೊಲೀಸರುಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.