ADVERTISEMENT

ಪಿಎಫ್ಐ ಸಂಘಟನೆ ನಿಷೇಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 3:52 IST
Last Updated 28 ಸೆಪ್ಟೆಂಬರ್ 2022, 3:52 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: 'ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಪಿಎಫ್ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ' ಎಂದರು.

'ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಕೂಡ ಪಿಎಫ್ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು' ಎಂದು ಮುಖ್ಯ ಮಂತ್ರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.