ADVERTISEMENT

ನೂತನ ಸಚಿವರಿಗೆ 2 ದಿನಗಳಲ್ಲಿ ಖಾತೆ ಹಂಚಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 13:02 IST
Last Updated 4 ಆಗಸ್ಟ್ 2021, 13:02 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ನೂತನ ಸಚಿವರಿಗೆ ಎರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಚಿವರ ಪ್ರಮಾಣ ವಚನದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದಿನ ಖಾತೆಯಲ್ಲೇ ಮುಂದುವರಿಸಿ ಅಥವಾ ಇಂಥದ್ದೇ ಖಾತೆ ಕೊಡಿ ಎಂದು ಯಾರೂ ಕೇಳಿಲ್ಲ’ ಎಂದರು.

‘ಖಾತೆ ಹಂಚಿಕೆ ಬಗ್ಗೆ ನಾನೇ ತೀರ್ಮಾಬ ಮಾಡುತ್ತೇನೆ’ ಎಂದೂ ತಿಳಿಸಿದರು.

ADVERTISEMENT

‘ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಾರ್ಯಪಡೆಯನ್ನು ಪುನರ್‌ರಚನೆ ಮಾಡಲಾಗುವುದು. ಪ್ರವಾಹದಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ತೆರಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.