ನವದೆಹಲಿ: ತಮ್ಮ ಪಕ್ಷದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದುಕಾಂಗ್ರೆಸ್ ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು.
ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.
ಇದನ್ನೂ ಓದಿ:ಬಿಜೆಪಿ ಸಂಸದರ ಜೊತೆ ರೌಡಿ ಸುನೀಲ್ ಪ್ರತ್ಯಕ್ಷ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನುಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.